ಮಧುಗಿರಿ: ಜಮೀನಿನಲ್ಲಿ ಮೇಯುತ್ತಿದ್ದ ಎರಡು ಮೇಕೆಗಳ ಮೇಲೆ ಚಿರತೆಯೊಂದು ದಾಳಿ ನಡೆಸಿದೆ.
ತಾಲ್ಲೂಕಿನ ದೊಡ್ಡೇರಿ ಗ್ರಾಮದ ರಂಗನಾಥಪ್ಪ ನವರಿಗೆ ಸೇರಿದ ಸುಮಾರು 30 ಸಾವಿರ ರೂ ಬೆಲೆ ಬಾಳುವಂತಹ ಮೇಕೆಗಳಾಗಿದ್ದು ಸಂಜೆ 4 ರ ಸಮಯದಲ್ಲಿ ಜಮೀನಿನಲ್ಲಿ ಮೇಯುತ್ತಿದ್ದ ವೇಳೆ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದ್ದು ಮೇಕೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಸ್ಥಳಕ್ಕೆ ಅರಣ್ಯಾಧಿಕಾರಿ ಹಂಚಿನಾಳ ಭೇಟಿ ನೀಡಿದ್ದರು.