ಪಾವಗಡ: ಬಟ್ಟೆ ಒಗೆಯುವ ವೇಳೆ ಮಹಿಳೆ ನೀರು ಪಾಲು

ಪಾವಗಡ ತಾಲೂಕಿನ ಬ್ಯಾಡನೂರು ನೀರಿನ ಹಳ್ಳದಲ್ಲಿ ಘಟನೆ

ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ಇಂದು ಬೆಳಗ್ಗೆ ಬಟ್ಟೆಗಳನ್ನು ತೊಳೆಯುವ ವೇಳೆ ನೀರಿನಲ್ಲಿ ಗ್ರಾಮದ ಗೋವಿಂದಪ್ಪ ಎನ್ನುವವರ ಪತ್ನಿ 35 ವರ್ಷದ ದೇವಿರಮ್ಮ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ,

ಅವರ ಮೃತ ದೇಹವನ್ನು ಹೊರತೆಗೆಯಲು ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರು ಅರಸ ಪಡುತ್ತಿದ್ದಾರೆ,.

ಪಾವಗಡ ತಾಲೂಕಿನ ಬ್ಯಾಡನೂರು ಗ್ರಾಮದಲ್ಲಿ ಇರುವಂತಹ ಶಂಕರಲಿಂಗನಕೆರೆ ಇತ್ತೀಚಿಗೆ ಕೋಡಿ ಬಿದ್ದಿತ್ತು.

ಈ ಹಳ್ಳದ ನೀರು ಹರಿಯುವ ಸ್ಥಳದಲ್ಲಿ ದೇವಿರಮ್ಮ ಎನ್ನುವರು ಬಟ್ಟೆ ಸ್ವಚ್ಛಗೊಳಿಸಲು ಇಂದು ಬೆಳಗ್ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ

ಈ ಬಗ್ಗೆ ಇನ್ನಷ್ಟು ಮಾಹಿತಿ ಈಗಷ್ಟೇ ಬರಬೇಕಿದೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!