ಲಿಂಗೇನಹಳ್ಳಿಯ ಸರ್ಕಾರಿ ಶಾಲೆಯ ಮುಂಭಾಗ ಅಪಘಾತವಾಲಯ ಎಂದು ಘೋಷಿಸಿ ಸೂಚನಾ ಫಲಕ ಅಳವಡಿಸಿ

ಮಧುಗಿರಿ: ಕಸಬಾ ವ್ಯಾಪ್ತಿಯ ಲಿಂಗೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿರುವ ರಸ್ತೆಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವುದರಿಂದ ಇದನ್ನು ಅಪಘಾತ ವಲಯ ಎಂದು ಘೋಷಿಸಿ ಸೂಚನ ಫಲಕ ಅಳವಡಿಸಬೇಕೆಂದು ಕಾಂಗ್ರೆಸ್ ಮುಖಂಡ S B T  ರಾಮು ಆಗ್ರಹಿಸಿದರು.

ಮಂಗಳವಾರ ಸಾಯಂಕಾಲ ಶಾಲೆ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವಿದ್ಯಾರ್ಥಿ ಕುಶಾಲ್ ಅಪಘಾತದಲ್ಲಿ ಸಾವನ್ನಪ್ಪಿದ್ದ ಹಾಗಾಗಿ ಇಂದು ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್ ಬಿಟಿ ರಾಮು ಈ ಸ್ಥಳದಲ್ಲಿ ಇತ್ತೀಚೆಗೆ ಹೆಚ್ಚು ಅಪಘಾತಗಳು ನಡೆಯುತ್ತಿದ್ದು ಕಳೆದ ವಾರ ಶಿಕ್ಷಕರೊಬ್ಬರು ಮೃತಪಟ್ಟಿದ್ದರು  ನಿನ್ನೆ ಸಾಯಂಕಾಲ ಶಾಲಾ ವಿದ್ಯಾರ್ಥಿಯೊಬ್ಬಳು ಅಪಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿ ಯಾವಾಗಲೂ ಅಪಘಾತಗಳು ಸಂಭವಿಸು ವುದರಿಂದ ಸಂಬಂಧ ಪಟ್ಟ ಇಲಾಖೆಯವರು ಇದನ್ನು ಅಪಘಾತವಾಲಯ ಎಂದು ಘೋಷಿಸಿ ಸೂಚನಾ ಫಲಕಗಳನ್ನು ಅಳವಡಿಸಿ ಈ  ರಸ್ತೆಯಲ್ಲಿ ಸುರಕ್ಷತೆಗೆ ವೈಜ್ಞಾನಿಕವಾಗಿ ರಸ್ತೆ ಹುಬ್ಬುಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ  ಶಿವಣ್ಣ, ಮೂರ್ತಣ್ಣ,  ಮಂಜುನಾಥ್,  ಸುವರ್ಣಮ್ಮ ಹಾಗೂ ಊರಿನ ಮುಖ್ಯ ಗ್ರಾಮಸ್ಥರ ಹಾಜರಿದ್ದರು

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!